ಸಮ್ಮೇಳನದ ಕುರಿತ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೀರಶೈವ ಲಿಂಗಾಯಿತ ಮಹಾಸಭಾದ ಅಧ್ಯಕ್ಷ ಡಾ ಶಾಮನೂರು ಶಿವಶಂಕರಪ್ಪ,”ಎಲ್ಲಾ ಸಮುದಾಯದವರು ಇಂದು ಎಷ್ಟೇ ಕಷ್ಟವಾದರೂ ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಶ್ರಮಿಸುತ್ತಿದ್ದಾರೆ. ಪುರಸ್ಕಾರಕ್ಕೆ ಮಹಾಸಭಾವೂ ಒಂದು ಕೋಟಿ ರೂ. ಮೀಸಲಿರಿಸಿದೆ. ಮುಂದಿನ ದಿನಗಳಲ್ಲಿ ಮಹಾಸಭಾದಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ವಿದ್ಯಾರ್ಥಿ ನಿಲಯ ಸ್ಥಾಪಿಸಲಾಗುವುದು” ಎಂದರು.

  • ಹೈಲೈಟ್ಸ್‌:
  • ತುಮಕೂರಿನ ಸಿದ್ದಗಂಗಾ ಮಠದಲ್ಲಿ ನಡೆದ ವೀರಶೈವ, ಲಿಂಗಾಯತ ಸ್ವಾಮೀಜಿಗಳ ಸಮಾವೇಶ.
  • ವೀರಶೈವರು, ಲಿಂಗಾಯತರು ಒಂದೇ; ಈ ಎರಡೂ ಸಮುದಾಯಗಳನ್ನು ಸೇರಿಸಿ ಪ್ರತ್ಯೇಕ ಸ್ಥಾನಮಾನ ನೀಡಬೇಕು;
  • ಕೇಂದ್ರದ ಒಬಿಸಿ ಪಟ್ಟಿಗೆ ವೀರಶೈವ- ಲಿಂಗಾಯತ ಸಮುದಾಯವನ್ನು ಸೇರಿಸಬೇಕು ಎಂದು ಸಮಾವೇಶದಲ್ಲಿ ನಿರ್ಣಯ ಅಂಗೀಕಾರ.
  • ಸಿದ್ದಗಂಗಾ ಮಠದಲ್ಲಿ ನಡೆದ ಲಿಂಗಾಯತ ಮಠಾಧೀಶರ ಸಮಾವೇಶದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶ್ಯಾಮನೂರು ಶಿವಶಂಕರಪ್ಪನವರಿಗೆ ಸನ್ಮಾನ ಮಾಡಲಾಯಿತು.


ತುಮಕೂರು: ವೀರಶೈವರು, ಲಿಂಗಾಯತರು ಎಲ್ಲ ಒಂದೇ. ವೀರಶೈವ ಲಿಂಗಾಯತ ಧರ್ಮಕ್ಕೆ ಪ್ರತ್ಯೇಕ ಧರ್ಮದ ಸ್ಥಾನಮಾನ ನೀಡಬೇಕು ಹಾಗೂ ಕೇಂದ್ರದ ಒಬಿಸಿ ಪಟ್ಟಿಯಲ್ಲಿಸೇರಿಸಬೇಕು ಎಂಬ ಮೂರು ನಿರ್ಣಯಗಳನ್ನು ಶೈವ ಲಿಂಗಾಯಿತ ಮಹಾಸಭಾ ಕೈಗೊಂಡಿದೆ. ತುಮಕೂರು ನಗರದ ಸಿದ್ಧಗಂಗಾ ಮಠದಲ್ಲಿ ಆಯೋಜಿಸಿದ್ದ ಎರಡು ದಿನಗಳ ಸಮಾವೇಶದಲ್ಲಿ ಭಾನುವಾರ ತೆಗೆದುಕೊಂಡ ನಿರ್ಣಯಕ್ಕೆ ಎಲ್ಲ ಸ್ವಾಮೀಜಿಗಳು, ಮಹಾಸಭೆಯ ಮುಖಂಡರು ತಮ್ಮ ಅನುಮೋದನೆಯನ್ನು ನೀಡಿದ್ದಾರೆ ಎಂದು ಸಮಾವೇಶ ಸಮಿತಿಯ ಪ್ರಧಾನ ಕಾರ್ಯದರ್ಶಿ ನಟರಾಜು ಸಾಗರನಹಳ್ಳಿ ಪ್ರಕಟಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ವೀರಶೈವ ಲಿಂಗಾಯಿತ ಮಹಾಸಭಾದ ಅಧ್ಯಕ್ಷ ಡಾ ಶಾಮನೂರು ಶಿವಶಂಕರಪ್ಪ,”ಎಲ್ಲಾ ಸಮುದಾಯದವರು ಇಂದು ಎಷ್ಟೇ ಕಷ್ಟವಾದರೂ ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಶ್ರಮಿಸುತ್ತಿದ್ದಾರೆ. ಪುರಸ್ಕಾರಕ್ಕೆ ಮಹಾಸಭಾವೂ ಒಂದು ಕೋಟಿ ರೂ. ಮೀಸಲಿರಿಸಿದೆ. ಮುಂದಿನ ದಿನಗಳಲ್ಲಿ ಮಹಾಸಭಾದಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ವಿದ್ಯಾರ್ಥಿ ನಿಲಯ ಸ್ಥಾಪಿಸಲಾಗುವುದು” ಎಂದರು.


ಸಿದ್ಧಗಂಗಾ ಮಠಾಧ್ಯಕ್ಷ ಶ್ರೀ ಸಿದ್ಧಲಿಂಗ ಸ್ವಾಮೀಜಿ ಮಾತನಾಡಿ, ”ಇಂದು ಮಂಡಿಸಿರುವ ಎಲ್ಲಾನಿರ್ಣಯಗಳು ಈ ಮಹಾಸಭಾವನ್ನು ಸ್ಥಾಪಿಸಿ ಸಮಾಜದಲ್ಲಿ ಐಕ್ಯತೆ ಮತ್ತು ಅಭಿವೃದ್ದಿಯ ಕನಸು ಕಂಡಿದ್ದ ಹಾನಗಲ್‌ ಕುಮಾರಸ್ವಾಮಿ ಅವರ ಆಶಯವಾಗಿತ್ತು. ಕಳೆದ ನೂರು ವರ್ಷಗಳಿಂದ ಅವರ ಕನಸು ನನಸು ಮಾಡಲು ಮಹಾಸಭಾ ಇಂದಿಗೂ ಪ್ರಯತ್ನಿಸುತ್ತಲೇ ಇದೆ. 2ಎ ಮತ್ತಿತರರ ಸವಲತ್ತು ಕೇಳುತ್ತಿರುವ ನಾವುಗಳು ಮೊದಲು ಶರಣಧರ್ಮವನ್ನು ಅನುಸರಿಸುತ್ತಿದ್ದೇವೆ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಬೇಕಿದೆ” ಎಂದರು.


ಈ ಸಂದರ್ಭದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ಜಿಲ್ಲಾಧ್ಯಕ್ಷ ಮೋಹನ್‌ ಕುಮಾರ್‌ ಪಟೇಲ್‌, ರಾಜ್ಯ ಯುವ ಘಟಕದ ಅಧ್ಯಕ್ಷ ಮನೋಹರ್‌ ಅಬ್ಬಿಗೆರೆ, ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಮುಕ್ತಾಂಭ ಬಸವರಾಜು, ಸಮಾವೇಶದ ಪ್ರಚಾರ ಸಮಿತಿ ಅಧ್ಯಕ್ಷ ಶಿವಕುಮಾರ್‌ ಡಾ.ಎನ್‌. ತಿಪ್ಪಣ್ಣ, ಡಾ.ಎಂ.ಎನ್‌.ಚನ್ನಬಸಪ್ಪ, ಎಸ್‌.ಕೆ. ರಾಜಶೇಖರ್‌ ಹಾಜರಿದ್ದರು