ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ‌ ನಾಗಮಂಗಲ ತಾಲೂಕಿನ ಎ.ನಾಗತಿಹಳ್ಳಿ ಬಳಿ ನಡೆದಿದೆ.

ಮಂಡ್ಯ: ಎರಡು ಕಾರುಗಳ ನಡುವೆ ಅಪಘಾತ (Accident) ಸಂಭವಿಸಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ‌ ನಾಗಮಂಗಲ (Nagmangala) ತಾಲೂಕಿನ ಎ.ನಾಗತಿಹಳ್ಳಿ ಬಳಿ ನಡೆದಿದೆ. ಘಟನೆಯಲ್ಲಿ ಐವರಿಗೆ ಗಾಯಗಳಾಗಿವೆ. ಸದ್ಯ ಗಾಯಾಳುಗಳನ್ನು ಬೆಳ್ಳೂರು ಕ್ರಾಸ್‌ನಲ್ಲಿರುವ BGS ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನಿಂದ ಹಾಸನದ ಕಡೆಗೆ ಹೋಗುತ್ತಿದ್ದ ಇನೋವಾ ಕಾರು ಮತ್ತು ಹಾಸನದಿಂದ ಬೆಂಗಳೂರು ಕಡೆ ಬರುತ್ತಿದ್ದ ಸ್ವಿಫ್ಟ್‌ ಕಾರಿನ ಮಧ್ಯೆ ಅಪಘಾತ ಸಂಭವಿಸಿದೆ. ಬಿಂಡಗನವಿಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ