ಉಡುಪಿ: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಯೊಬ್ಬಳು ಹಠಾತ್ ಅಸ್ವಸ್ಥಗೊಂಡ ಕಾರಣ ಖಾಸಗಿ ಬಸ್‌ ಚಾಲಕ ಸಮಯ ಪ್ರಜ್ಞೆ ಮೆರೆದು ಬಸ್ಸನ್ನು ಅಸ್ಪತ್ರೆಗೆ ಕೊಂಡೊಯ್ದ ಘಟನೆ ಆ.22ರಂದು ಉಡುಪಿಯಲ್ಲಿ ನಡೆದಿದೆ.

ಮಂಗಳೂರಿನಿಂದ ಮಣಿಪಾಲಕ್ಕೆ ಚಲಿಸುತ್ತಿದ್ದ ಎಕೆಎಂಎಸ್‌ ಬಸ್‌ಗೆ ಮುಲ್ಕಿಯಲ್ಲಿ ವಿದ್ಯಾರ್ಥಿನಿಯೋರ್ವಳು ಹತ್ತಿದ್ದಾಳೆ. ಉಡುಪಿಗೆ ಹೋಗಲೆಂದು ಹತ್ತಿದ್ದ ವಿದ್ಯಾರ್ಥಿನಿ ಕಟಪಾಡಿ ದಾಟಿ ಉದ್ಯಾವರ ಸಮೀಪಿಸುತ್ತಿದ್ದಂತೆ ಅಸ್ವಸ್ಥಗೊಂಡಿದ್ದಾಳೆ.

ವಿಷಯ ಅರಿತ ಬಸ್‌ ಚಾಲಕ ನಸೀಫ್ ಹಾಗೂ ನಿರ್ವಾಹಕ ಮೋಹಿತ್‌ ಕೂಡಲೇ ಬಸ್‌ನ್ನು ಉಡುಪಿಯ ಟಿ.ಎಂ.ಎ ಪೈ ಆಸ್ಪತ್ರೆಗೆ ಕೊಂಡೊಯ್ದು ಚಿಕಿತ್ಸೆ  ಕೊಡಿಸಿದ್ದಾರೆ. ಬಸ್‌ ಚಾಲಕ ಹಾಗೂ ನಿರ್ವಾಹಕನ ಮಾನವೀಯತೆಗೆ ಸಾರ್ವಜನಿಕರು ಪ್ರಸಂಸೆ ವ್ಯಕ್ತಪಡಿಸಿದ್ದಾರೆ